ಇದು ಅನುಕ್ಷಣದ ಮಾತು. ಇದು ನನ್ನ ಮಾತು, ನಿಮ್ಮ ಮಾತು. ಹಾಗೆಂದು ಬರೀ ಮಾತಾಗದೇ ಅಕ್ಷರಗಳಲ್ಲಿ ಅರಳಿದ ಮಾಲೆ. ಇದು ಪ್ರತಿ ಗುರುವಾರದ ಅಂಕಣ.
ಮುಂದೆ ಓದಿ...ಇದು ಸುದ್ದಿ ಮಾಡುವ ಪತ್ರಕರ್ತರು, ಪತ್ರಿಕೆ, ಪತ್ರಿಕಾಲಯ ಹಾಗೂ ಇಡೀ ಮಾಧ್ಯಮರಂಗದ ಸೂಕ್ಷ್ಮ ಮತ್ತು ಕುತೂಹಲ ಸಂಗತಿಗಳೆಲ್ಲ ಕತೆಯಾಗಿ ಅರಳುವ ಬಗೆ... ಈ ಕತೆ ಪ್ರತಿ ಶನಿವಾರ.
ಮುಂದೆ ಓದಿ...ಜೀವ, ಜೀವನ ಎಲ್ಲಿ ಇರುವುದೋ ಅಲ್ಲೆಲ್ಲ ಸಂತಸ, ವಿಷಾದ, ನೋವು, ನಲಿವು ಸಹಜ. ಯಾವ ಸಂಗತಿ, ಯಾರ ಜೀವನವೂ ನೀರಸ ಅಲ್ಲ. ಅಂಥ ಜನಜೀವನ, ಜನಗಳ ಮನ ಹೇಗಿದ್ದೀತು? ಇದು ಪ್ರತಿ ಭಾನುವಾರದ ಸರತಿ.
ಮುಂದೆ ಓದಿ...ಎಲ್ಲವುಗಳಿಗೂ ಒಂದು ನಿಯಮವಿದೆ ತಾನೆ? ನಮ್ಮ ಜೀವನಕ್ಕೂ ಅಂಥ ನಿಯಮವಿದ್ದರೆ ಹೇಗೆ? ಬದುಕಿಗೆ ಸುಂದರ ನಿಯಮಗಳ ತೋರಣ ಕಟ್ಟಿ ಇನ್ನಷ್ಟು ಚೆಂದಗೊಳಿಸುವುದಾದರೆ ಎಷ್ಟು ಸೊಗಸು ಅಲ್ಲವಾ? ಇದು ಪ್ರತಿ ದಿನದ ಅಂಕಣ
ಮುಂದೆ ಓದಿ...ಕೆಲವರು ಹಲ್ಲುಜ್ಜಿದರೆ ಕ್ಲೀನಾಗೋದು ಬ್ರಶ್! ನಾವು ನೋಡುವ ಪ್ರತಿ ಪ್ರಸಂಗದಲ್ಲೂ ಹಾಸ್ಯ, ವಾರೆನೋಟ ಬೀರಿದರೆ ಹುಟ್ಟುವ ಮಿಂಚೇ ವಕ್ರತುಂಡೋಕ್ತಿ.
ಮುಂದೆ ಓದಿ...ಕೆಲವರಿಗೆ ಗುಲಾಬಿ ಅಂದ್ರೆ ಮುಳ್ಳು, ಇನ್ನು ಕೆಲವರಿಗೆ ಹೂವು. ಪ್ರತಿಯೊಂದರಲ್ಲೂ ಸಕಾರಾತ್ಮಕ ಭಾವ ಕಾಣುವುದೇ ಉದ್ದೇಶವಾದರೆ ಬದುಕಿನ ಗತಿಯೇ ಬದಲಾವಣೆಯಾದೀತು. ಒಂದು ಪುಟ್ಟ ವಾಕ್ಯ ನಮ್ಮಲ್ಲಿ ಉಂಟುಮಾಡುವ ಸೆಳೆತವೇ ಇದು! ಇದಕ್ಕೆ ಅಂತಾರೆ ಸ್ಪೂರ್ತಿ ಸೆಲೆ.
ಮುಂದೆ ಓದಿ...ಓದುವಾಗ, ಸುಮ್ಮನಿದ್ದಾಗ ನಮ್ಮ ಮನದಲ್ಲಿ ಹಲವು ಕುತೂಹಲ ಹುಟ್ಟಿಸುವ ಯೋಚನೆಗಳು ಹಾದು ಹೋಗುವುದುಂಟು. ಅವುಗಳಿಗೆಲ್ಲ ತಡೆಗೋಡೆ ನಿರ್ಮಿಸಿದರೆ ಹೇಗೆ? ಅಂಥ ಯೋಚನೆಗಳು ಸುಳಿದಾಗಲೆಲ್ಲ ಇಲ್ಲಿ ಹಾಜರ್!
ಮುಂದೆ ಓದಿ...ನೀವು ಏನ್ ಬೇಕಾದ್ರೂ ಕೇಳಬಹುದು. ಆದರೆ ನಾವು ಏನ್ ಬೇಕಾದ್ರು ಹೇಳೊಲ್ಲ, ಬದಲು ಹೇಳಬೇಕಾದುದನ್ನೇ ಹೇಳುತ್ತೇವೆ. ಕೇಳುವವರು ಸರಿಯಾಗಿ ಕೇಳಬೇಕಷ್ಟೇ.
ಮುಂದೆ ಓದಿ...
ಕೆಲ ವರ್ಷಗಳ ಹಿಂದೆ ರಾಬಿನ್ ಎಸ್. ಶರ್ಮ ಎಂಬ ಆಧುನಿಕ ವ್ಯಕ್ತಿತ್ವ ವಿಕಸನ (Personality Developmentಿ) ಗುರುವನ್ನು ಭೇಟಿ ಮಾಡಿದ್ದೆ. ಭಲೇ ಲವಲವಿಕೆಯ ಮನುಷ್ಯ. ಆಪ್ತವಾಗಿ ಮಾತನಾಡುತ್ತಾನೆ. ಪುಟ್ಟ ಪುಟ್ಟ ಪ್ರಸಂಗಗಳನ್ನು ಹೇಳಿ ಗಮನ ಸೆಳೆಯುತ್ತಾನೆ. ವ್ಯಕ್ತಿತ್ವ ವಿಕಸನಕ್ಕೆ ಸಂಬಂಧಿಸಿದ ಚರ್ವಿತಚರ್ವಣಗಳನ್ನು ಬಡಬಡಿಸುವುದಿಲ್ಲ. ಹಳೇ ಜೋಕುಗಳನ್ನು ಹೇಳಿ ಹಿಂಸಿಸುವುದಿಲ್ಲ. ವ್ಯಕ್ತಿತ್ವ ವಿಕಸನ ಪಾಠ, ಕಾರ್ಯಾಗಾರಗಳನ್ನೇ ಕಸುಬಾಗಿ ಮಾಡಿಕೊಂಡ ಶಿವಖೇರ, ಆ್ಯಂಥೋನಿ ವಿಲಿಯೆಮ್ಸ್, ಡಾ. ಭರತಚಂದ್ರ, ಯಂಡಮೂರಿ ವೀರೇಂದ್ರನಾಥ (ಹೊಸ ಸೇರ್ಪಡೆ) ಮುಂತಾದವರೊಂದಿಗೆ ಮಾತನಾಡುವಾಗ ಸಿದ್ಧ ಪಾಶ್ಚಿಮಾತ್ಯ ಮಾದರಿಯನ್ನು ನಮ್ಮ ಮೇಲೆ ಹೇರಲು ಪ್ರಯತ್ನಿಸುತ್ತಿದ್ದಾರಾ ಎಂಬ ಗುಮಾನಿಯಾಗುತ್ತದೆ.
ಇದ್ದುದರಲ್ಲಿ ನಮ್ಮ ಯಂಡಮೂರಿ, ಡಾ. ಭರತ್್ಚಂದ್ರ ಪರವಾಗಿಲ್ಲ. ಪಾಶ್ಚಾತ್ಯ ನಿದರ್ಶನಗಳಿಗೆ ಹೋಲುವ ಭಾರತದ ಉದಾಹರಣೆಗಳನ್ನು ಸಾಕಷ್ಟು ಸಂಗ್ರಹಿಸಿದ್ದಾರೆ. ಫುಲ್್ಟೈಮ್ ಕಥೆ, ಕಾದಂಬರಿ ಬರೆಯುವುದನ್ನು ಬಿಟ್ಟು ಯಂಡಮೂರಿ ಈಗ ಫುಲ್್ಟೈಮ್ ವ್ಯಕ್ತಿತ್ವ ವಿಕಸನ ಗುರುವಾಗಿದ್ದಾರೆ. ಕಳೆದ ಐದಾರು ವರ್ಷಗಳಲ್ಲಿ ಅವರು ಈ ವಿಷಯಕ್ಕೆ ಸಂಬಂಧಿಸಿದ ಪುಸ್ತಕಗಳನ್ನೇ ಬರೆದಿದ್ದಾರೆ. ಪರ್ಸನಾಲಿಟಿ ಡೆವಲಪ್್ಮೆಂಟ್ ಕುರಿತ ಅವರ ಕಾರ್ಯಾಗಾರದಲ್ಲಿ ಪಾಲ್ಗೊಂಡವರಿಗೆ ಈ ಪುಸ್ತಕಗಳನ್ನು ಓದುವವರಿಗೆ ‘ಕತೆಗಾರ ಯಂಡಮೂರಿ ಕಳೆದುಹೋದರಾ?’ ಎಂಬ ಬೇಸರ ಮುತ್ತಿಕೊಳ್ಳುತ್ತದೆ. ಯಂಡಮೂರಿ ‘ವ್ಯಕ್ತಿತ್ವ ವಿಕಸನ’ ಕುರಿತು ಹತ್ತಾರು ಒಳ್ಳೆಯ ಕೃತಿಗಳನ್ನು ಬರೆದಿದ್ದಾರೆ.
ವ್ಯಕ್ತಿತ್ವ ವಿಕಸನ ಗುರುಗಳ ದೊಡ್ಡ ಸಮಸ್ಯೆಯೆಂದರೆ ತಮ್ಮ ವ್ಯಕ್ತಿತ್ವವನ್ನೇ ವಿಕಸನಗೊಳಿಸಿಕೊಳ್ಳದಿರುವುದು. ಇವರ್ಯಾರ ಮಾತುಗಳನ್ನು ಎರಡನೆ ಸಲ ಕೇಳುವುದೆಂದರೆ ಕಿವಿಗೆ ಕಾದ ಸೀಸ ಹುಯ್ದಂತೆ. ಒಂದೆಡೆ ಹೇಳಿದ್ದನ್ನೇ ಎಲ್ಲ ಕಡೆ ಉಸುರುತ್ತಾರೆ. ಹದಿನೈದು ವರ್ಷಗಳ ಹಿಂದೆ ಆ್ಯಂಥೋನಿ ವಿಲಿಯಮ್ಸ್ ಎಂಬುವವರ ಕಾರ್ಯಾಗಾರ ಪ್ರವೇಶ ಉಪನ್ಯಾಸವನ್ನು ಕೇಳಿದ್ದೆ. ಮೂರು ವರ್ಷಗಳ ಹಿಂದೆ ಅದನ್ನು ಕೇಳಿದಾಗ ಅದನ್ನೇ ಬಡಬಡಿಸುತ್ತಿದ್ದರು. ಸ್ವಲ್ಪವೂ ವ್ಯತ್ಯಾಸವಿಲ್ಲ. ಎರಡನೇ ಸಲಕ್ಕೆ ಕಿವಿಗೊಟ್ಟರೆ ಇವರೆಂಥ ಖಾಲಿ ಖಾಲಿ ಎನಿಸುತ್ತದೆ. (ನಮ್ಮ ಈಶ್ವರಪ್ಪ, ಯಡಿಯೂರಪ್ಪ ಅವರೇ ವಾಸಿ ಅನಿಸುತ್ತಾರೆ.)
ನಾನು ರಾಬಿನ್ ಶರ್ಮನನ್ನು ಭೇಟಿ ಮಾಡಿದ್ದು ಮೊದಲ ಬಾರಿಯಾಗಿದ್ದರಿಂದ ಆತ ಇಷ್ಟವಾದ. ಇದು ಎರಡನೆಯ ಸಲ ಭೇಟಿಯಾಗುವ ಹೊತ್ತಿಗೆ ಏನಾಗಿರುತ್ತದೋ ಗೊತ್ತಿಲ್ಲ. ವ್ಯಕ್ತಿತ್ವ ವಿಕಸನ ಎಂಬ ಕೋರ್ಸು, ಡಿಸ್ಕೋರ್ಸುಗಳಲ್ಲಿ ಹೇರಳ ಹಣವಿದೆ. ಏನೇ ಪುಸ್ತಕ ಬರೆದರೂ ಖರ್ಚಾಗುತ್ತದೆ. ರೇಸ್ ಪುಸ್ತಕಕ್ಕಿಂತ ಬೇಗ ಮಾರಾಟವಾಗುವ ಪುಸ್ತಕಗಳೆಂದರೆ ಇವೇ! ಹೀಗಾಗಿ ವಿಚಿತ್ರ ಪುಸ್ತಕಗಳು ಬಂದಿವೆ. ಹಾಸಿಗೆ ಮೇಲೆ ಗಂಡನನ್ನು ರಮಿಸುವುದು ಹೇಗೆ? ಒಳ್ಳೆಯ ಗಂಡನಾಗುವುದು ಹೇಗೆ? ಉತ್ತಮ ತಂದೆಯಾಗುವುದು ಹೇಗೆ? ಇಲ್ಲ ಅಂತ ಹೇಳುವಾಗಲೆಲ್ಲ ಹೌದು ಅಂತ ಏಕೆನ್ನುತ್ತೀರಿ? ನಿಮ್ಮೊಳಗಿನ ನೀವು ಏಕೆ ಅಲ್ಲಿಯೇ ಇದ್ದಾನೆ? ಉತ್ತಮ ಅತ್ತೆ-ಸೊಸೆಯಾಗುವುದು ಹೇಗೆ?…ಹೀಗೆ ವಿಶಿಷ್ಟ (!) ಹಾಗೂ ಅಸಂಬದ್ಧ ಪುಸ್ತಕಗಳೆಲ್ಲ ದಂಡಿಯಾಗಿ ಮಾರಾಟವಾಗುತ್ತವೆ. (ಈ ಸಾಲಿಗೆ ನನ್ನದೂ ಎರಡು ಕೊಡುಗೆಗಳಿವೆ). ಹಾಗಂತ ನಾನು ಈ ಕೋರ್ಸ್್ಗಳನ್ನಾಗಲಿ, ಪುಸ್ತಕಗಳನ್ನಾಗಲಿ ಸಾರಾಸಗಟು ತಿರಸ್ಕರಿಸುತ್ತಿಲ್ಲ. ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗುವ ಕೆಲವು ಹೊಳಹುಗಳನ್ನು ಈ ಕೃತಿಗಳು ಚಿಮ್ಮಿಸಬಲ್ಲವು. ನಮ್ಮಲ್ಲೊಂದು ಸ್ಫೂರ್ತಿಯ ಚಿಲುಮೆಯನ್ನು ಹೊತ್ತಿಸಬಲ್ಲವು. ಅಲ್ಲಿಗೆ ಅವುಗಳ ಕೆಲಸ ಮುಗಿಯಿತು. ಆ ಪ್ರೇರಣೆಯನ್ನು ರಕ್ಷಿಸಿಕೊಂಡು ಮುಂದೆ ಬೆಳೆಯುವುದಿದ್ದರೆ, ಅದೇನಿದ್ದರೂ ನಮ್ಮ ಪ್ರಯತ್ನದಿಂದಲೇ ಆಗಬೇಕು. ಇದು ವ್ಯಕ್ತಿತ್ವ ವಿಕಸನ ಪುಸ್ತಕ, ಕಾರ್ಯಾಗಾರಗಳ ಹೆಚ್ಚುಗಾರಿಕೆ ಹಾಗೂ ಮಿತಿಯೂ ಹೌದು.
ಈ ಹಿನ್ನೆಲೆಯಲ್ಲಿ ರಾಬಿನ್ ಶರ್ಮ ಭೇಟಿ ಮಾಡಿದ್ದು. ಹೀಗಾಗಿ ಮೊದಲ ಭೇಟಿಯಲ್ಲಿ ಬೆರಗಾಗುವುದಕ್ಕಿಂತ ಬರಿದಾಗಿರುವ ತುಡಿತವೇ ಹೆಚ್ಚಾಗಿತ್ತು. ನಿಮಗೆ ಗೊತ್ತಿರಬಹುದು ರಾಬಿನ್ ಶರ್ಮ The monk who sold his Ferari ಪುಸ್ತಕ ಬರೆದಾಗ ಬಹಳ ಬೇಗ ಜನಪ್ರಿಯರಾದರು. ಅದಾದ ಬಳಿಕ Family Wisdom, Mega Living, Leadership Wisdom ಬರೆದರು. ಅಷ್ಟೊತ್ತಿಗೆ ಶರ್ಮ ಎಲ್.ಎಲ್.ಬಿ., ಎಲ್.ಎಲ್.ಎಂ. ಮಾಡಿ ಕೆಲಕಾಲ ವಕೀಲರಾಗಿದ್ದರು. ಈಗ ಫುಲ್್ಟೈಮ್ ವ್ಯಕ್ತಿತ್ವ ವಿಕಸನ ಗುರು. ಅವರನ್ನು ಭೇಟಿಯಾದ ಸಂದರ್ಭದಲ್ಲಿ ಶರ್ಮ Who will cry when you die?(ನೀವು ಸತ್ತಾಗ ಅಳುವವರು ಯಾರು?) ಎಂಬ ತಮ್ಮ ಕೃತಿಯನ್ನು ಕೊಟ್ಟರು. ಎರಡು ವರ್ಷಗಳಲ್ಲಿ 24 ಆವೃತ್ತಿಗಳನ್ನು ಕಂಡ ಪುಸ್ತಕವಿದು! ನಾಲ್ಕೈದು ತಾಸುಗಳಲ್ಲಿ ಓದಿಡಬಹುದಾದ 225 ಪುಟಗಳ ಕೃತಿ. ನೂರೊಂದು ಜೀವನಪಾಠಗಳನ್ನು ಶರ್ಮ ಪಟ್ಟಿ ಮಾಡಿದ್ದಾರೆ. ನಾವು ನಿತ್ಯವೂ ನಿರ್ಲಕ್ಷಿಸುವ, ಅಷ್ಟೊಂದು ಪ್ರಾಮುಖ್ಯ ಕೊಡದ ಸಂಗತಿಗಳ ಬಗ್ಗೆ ಚರ್ಚಿಸಲಾಗಿದೆ. ಕೆಲವು ಇಷ್ಟವಾದ ಪುಟ್ಟ ಪುಟ್ಟ ಹನಿಗಳನ್ನು ಇಲ್ಲಿ ಹಿಡಿದಿಟ್ಟಿದ್ದೇನೆ.
* ನಮ್ಮ ಜೀವನದಲ್ಲಿ ಸಂಭವಿಸಬಹುದಾದ ದೊಡ್ಡ ದುರಂತವೆಂದರೆ ಖಂಡಿತವಾಗಿಯೂ ಸಾವು ಅಲ್ಲ. ನಾವು ಬದುಕಿರುವಾಗ ನಮ್ಮೊಳಗಿನ ಅಂತಃಸತ್ವವನ್ನು ಸಾಯಗೊಟ್ಟಿರುತ್ತೇವಲ್ಲ, ಅದು ನಿಜವಾಗಿಯೂ ದೊಡ್ಡ ದುರಂತ.
* ಪರ್ಶಿಯನ್ ಗಾದೆ ಮಾತೊಂದನ್ನು ಕೇಳಿದ ಬಳಿಕ ನನ್ನ ಜೀವನದಲ್ಲಿ ಕೊರಗು ಎಂಬುದು ಇಲ್ಲವೇ ಇಲ್ಲ. ಅದೇನಪ್ಪಾ ಅಂದ್ರೆ- ನನಗೆ ಬೂಟುಗಳೇ ಇಲ್ಲವಲ್ಲಾ ಎಂದು ಅಳುತ್ತಿದ್ದೆ. ಅಪ್ಪನನ್ನು ಕೇಳಿದೆ. ಆತ ತೆಗೆಸಿಕೊಡಲಿಲ್ಲ. ಒಂದು ಜೊತೆ ಬೂಟು ಖರೀದಿಸಲಾಗದ ದರಿದ್ರ ಜೀವನ ಎಂದು ಬೇಸರಿಸಿಕೊಂಡೆ. ಇದು ಜೀವನವಾ ಅನಿಸಿತು. ಹಾಗೆ ಯೋಚಿಸುತ್ತಿರುವಾಗ ಎರಡೂ ಕಾಲುಗಳೇ ಇಲ್ಲದ, ಆದರೆ ಸಂತಸದಿಂದ ಇರುವ ವ್ಯಕ್ತಿಯೊಬ್ಬನನ್ನು ನೋಡಿಕೊಂಡೆ. ನಾನು ಪರಮಸುಖಿಯೆನಿಸಿತು.
* ಅಪರಿಚಿತರಾದವರಿಗೆ ಪುಟ್ಟ ಸಹಾಯ ಮಾಡಿ. ಅವರು ತಟ್ಟನೆ ನಿಮ್ಮ ಸ್ನೇಹಿತರಾಗುತ್ತಾರೆ. ಟೋಲ್್ಗೇಟ್್ನಲ್ಲಿ ನಿಮ್ಮ ಹಿಂದಿನ ಕಾರಿನವರ ಹಣವನ್ನೂ ನೀವೇ ಪಾವತಿಸಿ ನೋಡಿ. ನೀವ್ಯಾರೆಂದು ಆತ ಪರಿಚಯಿಸಿಕೊಳ್ಳದೇ ಹೋಗಲಿಕ್ಕಿಲ್ಲ. ಪುಟ್ಟ ಕಾರಣಕ್ಕೆ ನಿಮಗೊಂದು ಸ್ನೇಹ ದೊರಕಬಹುದು.
* ಹೇಳುವುದು ಸುಲಭ. ಆದರೆ ಆಚರಣೆಗೆ ತರುವುದು ಕಷ್ಟ. ಅದೇನೆಂದರೆ ಚಿಂತೆ ಬಿಡಿ ಎಂಬ ಉಪದೇಶ. ಆದರೂ ಈ ನಿಯಮ ಪಾಲಿಸಿ. ಯಾವುದಕ್ಕೆ ನಾವು ಚಿಂತಿಸುತ್ತೇವೋ ಬಹುತೇಕ ಸಂದರ್ಭಗಳಲ್ಲಿ ಅವು ಘಟಿಸುವುದೇ ಇಲ್ಲ. ಚಿಂತಿಸಿದ್ದೊಂದೇ ‘ಲಾಭ’!
* ನೀವು ನಿಮ್ಮ ಮಕ್ಕಳಿಗೆ ಕೊಡಬಹುದಾದ ದೊಡ್ಡ ಕೊಡುಗೆಯೆಂದರೆ ಆಟಿಕೆಯಲ್ಲ. ಚಾಕೋಲೇಟ್ ಅಲ್ಲ. ಆದರೆ ನಿಮ್ಮ ಸಮಯ. ನಾವು ಅದೊಂದನ್ನು ಬಿಟ್ಟು ಮಿಕ್ಕಿದ್ದೆಲ್ಲವನ್ನೂ ಕೊಡುತ್ತೇವೆ. ಅಲ್ಲಿಗೆ ನಮ್ಮ ಕರ್ತವ್ಯ ಮುಗಿಯಿತೆಂದು ತಿಳಿಯುತ್ತೇವೆ. ನಿಮ್ಮ ಸಮಯಕ್ಕಿಂತ ದೊಡ್ಡ ಕೊಡುಗೆ ಮತ್ತೊಂದಿಲ್ಲ.
* ಜೀವನದಲ್ಲಿ ದೊಡ್ಡ ಕೆಲಸ, ಕಾರ್ಯವೆಂಬುದು ಇಲ್ಲವೇ ಇಲ್ಲ. ದೊಡ್ಡ ಪ್ರೀತಿಯಿಂದ ಮಾಡಿದ ಎಷ್ಟೇ ಸಣ್ಣ ಕೆಲಸವಾದರೂ ಅದು ದೊಡ್ಡ ಕೆಲಸ, ಕಾರ್ಯವೇ.
* ಜೀವನದಲ್ಲಿ ಸಣ್ಣ ಸಂಗತಿಗಳೇ ದೊಡ್ಡವು. ಮನೆಗೆಲಸದಾಕೆಗೆ ಸಂಬಳ ಕೊಡದವ ಕಚೇರಿಯಲ್ಲಿ ಸಿಬ್ಬಂದಿಯನ್ನೂ ಸತಾಯಿಸುತ್ತಾನೆ. ನಿಮ್ಮ ಸ್ನೇಹಿತರಿಗೆ ನೀವು ಸೈಟು, ಮನೆ ಕೊಡದಿರಬಹುದು. ಆದರೆ ಒಂದು ಪುಟ್ಟ ಕೈಗಡಿಯಾರ, ಪುಸ್ತಕ, ಪೆನ್ನು ಕೊಡದಿರುವಷ್ಟು ಯಾರೂ ಬಡವರಲ್ಲ. ಆಗಾಗ ಗಿಫ್ಟ್್ಗಳನ್ನು ಕೊಡುತ್ತೀರಿ.
* ನಿಮ್ಮ ಜೊತೆಗೆ ಸದಾ ಒಂದು ಪುಸ್ತಕವನ್ನಿಟ್ಟುಕೊಳ್ಳಿ. ಎಂದಿಗೂ ನೀವು ಏಕಾಂಗಿ ಎಂದೆನಿಸುವುದಿಲ್ಲ. ಬೋರು ನಿಮ್ಮ ಸನಿಹ ಸುಳಿಯುವುದಿಲ್ಲ.
* ನೀವು ಎಷ್ಟು ದಿನ ಬದುಕಿರುತ್ತೀರೋ, ಏನಾದರೂ ಹೊಸತನ್ನು ಕಲಿಯುತ್ತಿರಿ. ನೂರು ವರ್ಷ ಬಾಳಿದರೂ ಅದೆಷ್ಟು ಕಡಿಮೆ ವರ್ಷ ಬದುಕಿನೆಂದು ನಿಮಗನಿಸುತ್ತದೆ.
* ಸಾಧ್ಯವಾದರೆ ನಿಮ್ಮ ಚಪ್ಪಲಿ, ಬೂಟು ತೆಗೆದಿಟ್ಟು ಹಸಿರು ಹುಲ್ಲಿನ ಮೇಲೆ ನಡೆಯಿರಿ. ಸ್ವಲ್ಪ ದೂರ ನಡೆಯುತ್ತಿರುವಂತೆ ನಿಮಗೆ ಹಿತವೆನಿಸುತ್ತದೆ. ಈ ಪುಟ್ಟ ಹುಲ್ಲಿನ ಗಿಡಗಳನ್ನು ನಾನು ಸಾಯಿಸುತ್ತಿದ್ದೇನಲ್ಲ ಎಂದು ನಿಮಗೆ ಬೇಸರವಾಗುತ್ತದೆ. ಈ ಬೇಸರವೇ ನಿಜವಾದ ಕಾಳಜಿ.
* ಹೂಗಳು ಗಿಡದಲ್ಲಿದ್ದರೆ ಚೆಂದ. ಅವನ್ನು ಕೊಯ್ದ ಬಳಿಕ ಗಿಡದ ಸೌಂದರ್ಯ ಕುಗ್ಗುತ್ತದೆ. ಹೂವುಗಳು ಬಾಡುತ್ತವೆ. ಪ್ರಕೃತಿಯ ಸಣ್ಣ ಸಣ್ಣ ವಿಚಿತ್ರಗಳು ನಮ್ಮಲ್ಲಿ ಬೆರಗನ್ನುಂಟು ಮಾಡಬಲ್ಲವು.
* ಕುರಿಮಂದೆಯಂತಿರುವ ಜನಜಂಗುಳಿಯನ್ನು ಎಂದಿಗೂ ಅನುಸರಿಸಿ ನಡೆಯಬೇಡಿ. ಸಿನಿಮಾದಲ್ಲಿನ ಜನಜಂಗುಳಿಯನ್ನು ಅನುಸರಿಸಿದರೆ ಊ್ಢ್ಝಡಿ(ನಿರ್ಗಮನ ಬಾಗಿಲು) ತಲುಪಿರುತ್ತೀರಿ. ಎಲ್ಲರೂ ಕೈ ಎತ್ತುವಾಗ ನಾವೂ ಕೈ ಎತ್ತುವುದು ಬಹಳ ಸುಲಭ. ಎತ್ತದಿರುವುದೇ ಕಷ್ಟ.
* ಸದಾ ಒಳ್ಳೆಯ ಕೆಲಸವನ್ನೇ ಏಕೆ ಮಾಡಬೇಕು? ಹೂವುಗಳನ್ನು ಕೊಡುವ ಕೈ ಸದಾ ಪರಿಮಳವನ್ನು ಸೂಸುತ್ತಿರುತ್ತದೆ. ಕೈಗೆ ಜೇನುತುಪ್ಪ ಅಂಟಿಕೊಂಡಿದ್ದರೆ ಯಾರೂ ಕೈ ನೆಕ್ಕದೇ ತೊಳೆದುಕೊಳ್ಳುವುದಿಲ್ಲ.
* ನಿಮ್ಮೊಂದಿಗೆ ಸದಾ ಇಬ್ಬರು ವೈದ್ಯರಿದ್ದಾರೆ. ನಿಮಗೆ ಗೊತ್ತಿಲ್ಲದಂತೆ. ಒಬ್ಬರು ಬಲಗಾಲು, ಮತ್ತೊಬ್ಬರು ಎಡಗಾಲು. ಇವರಿಬ್ಬರ ಜತೆ ನೀವು ದಿನಕ್ಕೆ ಎರಡು ಮೈಲಿ ಹೆಜ್ಜೆ ಹಾಕಿ. ರೋಗ ನಿಮ್ಮ ಹತ್ತಿರ ಸುಳಿದರೆ ನೋಡಿ.
* ನೀವೆಷ್ಟೇ ಪ್ರಸಿದ್ಧರಾಗಿ. ಅದು ಶಾಶ್ವತವಲ್ಲ. ಒಲಿಂಪಿಕ್ಸ್ ಕ್ರೀಡಾಕೂಟ ಮುಗಿದ ಸ್ವಲ್ಪ ದಿನಗಳ ನಂತರ ಬಂಗಾರ ಗೆದ್ದ ಕ್ರೀಡಾಪಟುಗಳನ್ನೂ ಜನ ಮರೆಯುತ್ತಾರೆ. ಚಂದ್ರನ ಮೇಲೆ ಮೊದಲಿಗೆ ಕಾಲಿಟ್ಟವರೂ ಕೆಲ ದಿನಗಳ ಬಳಿಕ ನೇಪಥ್ಯಕ್ಕೆ ಸರಿಯುತ್ತಾರೆ. ಜನಮಾನಸದಿಂದ ದೂರವಾದ ಮಾತ್ರಕ್ಕೆ ಜೀವನ ಮುಗಿಯಿತು ಎಂದಲ್ಲ. ಅದಕ್ಕಾಗಿ ಹೊಸ ಹೊಸ ಸಾಹಸಕ್ಕೆ ನಮ್ಮನ್ನು ಅಣಿಗೊಳಿಸಿಕೊಳ್ಳಬೇಕು.
* ಸದಾ ಮನೆ, ಮಂದಿಯ, ನಿಮ್ಮ ಮಕ್ಕಳ ಹಾಗೂ ನಿಮ್ಮ ಫೋಟೋ ತೆಗೆಯುತ್ತೀರಿ. ವರ್ಷಕ್ಕೆ ಕನಿಷ್ಠ ಐದಾರು ಆಲ್ಬಮ್್ಗಳನ್ನು ಸಂಗ್ರಹಿಸಿಡಿ. 20-30 ವರ್ಷಗಳ ಬಳಿಕ ಇದೊಂದು ಅಮೂಲ್ಯ ನೆನಪುಗಳ ಆಗರವಾಗಿರುತ್ತದೆ. ನೀವು ನಿಮ್ಮ ಮಕ್ಕಳಿಗೆ ಕೊಡಬಹುದಾದ ಉತ್ತಮ ಕೊಡುಗೆಗಳಲ್ಲಿ ಸಿಹಿ ನೆನಪು ಸಹ ಒಂದು.
* ಸರಿಯಾದ ಸಮಯ, ಸಂದರ್ಭ, ವ್ಯಕ್ತಿಗಳ ಮುಂದೆ ಸಿಟ್ಟು ಮಾಡಿಕೊಳ್ಳುವುದನ್ನು ಕಲಿತರೆ ನಿಮ್ಮ ಮನಸ್ಸನ್ನು ಹಿಡಿತದಲ್ಲಿಟ್ಟುಕೊಂಡಿದ್ದೀರೆಂದೇ ಅರ್ಥ. ಸಿಟ್ಟು ಸಹ ಸುಂದರ ಹಾಗೂ ಸಾರ್ಥಕವೆನಿಸುವುದು ಆಗಲೇ.
* ವರ್ಷದಲ್ಲಿ ಒಂದು ವಾರ ಮರ, ಗಿಡ, ನದಿ, ಗುಡ್ಡ, ಬೆಟ್ಟದಲ್ಲಿ ಕಳೆಯಿರಿ. ಮನುಷ್ಯರಿಗಿಂತ ಇವು ಇಷ್ಟೊಂದು ಸುಂದರವಾಗಿವೆಯೆಂಬುದು ಗೊತ್ತಾಗುತ್ತದೆ.
* ನಿದ್ದೆ ಮಾಡಬೇಕೆನಿಸಿದಾಗ ಮತ್ತೇನನ್ನೂ ಮಾಡಬೇಡಿ. ಚೆನ್ನಾಗಿ ನಿದ್ದೆ ಮಾಡಿ. ನಿದ್ದೆಗಿಂತ ಸುಖ ಇನ್ನೊಂದಿಲ್ಲ. ಆದರೆ ಇದನ್ನು ಎಷ್ಟು ಮಾಡಬೇಕೆಂಬುದು ಗೊತ್ತಿರಲಿ.
* ಮಳೆಗಾಗಿ ಪ್ರಾರ್ಥನೆ, ಜಪ, ಯಾಗ ಮಾಡುವುದು ತಪ್ಪಲ್ಲ. ಆದರೆ ಹೀಗೆ ಮಾಡುವಾಗ ಕೈಯಲ್ಲೊಂದು ಕೊಡೆಯಿರಲಿ. ನಾವು ಮಾಡುವ ಕೆಲಸದ ಪರಿಣಾಮವೇನೆಂಬುದು ನಮಗೆ ತಿಳಿದಿರಬೇಕು.
* ಸಾಧ್ಯವಾದರೆ ಕೊಟೇಷನ್ ಸುಪ್ರಭಾತಗಳನ್ನು ಸಂಗ್ರಹಿಸಿಟ್ಟುಕೊಳ್ಳಿ. ಇವುಗಳಲ್ಲಿರುವಷ್ಟು ಜೀವನಾಮೃತ ಬೇರೆಲ್ಲೂ ಸಿಗಲಿಕ್ಕಿಲ್ಲ. ಒಂದು ಕಾದಂಬರಿ, ಪುಸ್ತಕದ ಸತ್ವ ಸುಭಾಷಿತವೊಂದರಲ್ಲಿ ಅಡಗಿರುತ್ತದೆ.
* ನಿಮಗೆಷ್ಟೇ ಸ್ನೇಹಿತರಿರಬಹುದು. ಸಲಹೆಗಾರರಿರಬಹುದು. ಆದರೆ ನಿಮ್ಮ ಆಪ್ತ ಸ್ನೇಹಿತ, ಆಪ್ತ ಸಲಹೆಗಾರ ನೀವೇ ಎಂಬುದನ್ನು ಮರೆಯಬೇಡಿ. ನಿಮ್ಮ ವೈರಿಯೂ ನೀವೇ.
- ವಿಶ್ವೇಶ್ವರ ಭಟ್
idellavannoo madiri..bidiri..adare ondu matra mareyadiri maretu nirasharagadiri..innomme mattomme magadomme…maaduttale,anadisuttale iri…adu enendare…..ahhhhahhhaaaahhhaaaahhhhhhhhhhaaaaaaaaaa…hehehehehhhhhhhheeeehhhhheeee hayheheheheee..iiiiiiyayayaaaaa..aaaaaaaaaaaaaaaa………
Sir,Definitely people will read this type of personality development article , but in the next few minutes they will forget it off.The only thing repeatedly they think and thought is Nam Bhatru Robin sharma na meet madidrante estu lucky aaaa Robin sharma. Thats why VYAKTITVA VIKASANAKKINTA VYAKTHIYA JAANATANAVE LESU nam bhattara hage.
Very motivational …. made my day …
Nice thoughts by Mr.Robin Sharma.
Liked all….
Liked the most –
* ನಿಮಗೆಷ್ಟೇ ಸ್ನೇಹಿತರಿರಬಹುದು. ಸಲಹೆಗಾರರಿರಬಹುದು. ಆದರೆ ನಿಮ್ಮ ಆಪ್ತ ಸ್ನೇಹಿತ, ಆಪ್ತ ಸಲಹೆಗಾರ ನೀವೇ ಎಂಬುದನ್ನು ಮರೆಯಬೇಡಿ. ನಿಮ್ಮ ವೈರಿಯೂ ನೀವೇ.
* ಹೂಗಳು ಗಿಡದಲ್ಲಿದ್ದರೆ ಚೆಂದ. ಅವನ್ನು ಕೊಯ್ದ ಬಳಿಕ ಗಿಡದ ಸೌಂದರ್ಯ ಕುಗ್ಗುತ್ತದೆ. ಹೂವುಗಳು ಬಾಡುತ್ತವೆ. ಪ್ರಕೃತಿಯ ಸಣ್ಣ ಸಣ್ಣ ವಿಚಿತ್ರಗಳು ನಮ್ಮಲ್ಲಿ ಬೆರಗನ್ನುಂಟು ಮಾಡಬಲ್ಲವು.
* ವರ್ಷದಲ್ಲಿ ಒಂದು ವಾರ ಮರ, ಗಿಡ, ನದಿ, ಗುಡ್ಡ, ಬೆಟ್ಟದಲ್ಲಿ ಕಳೆಯಿರಿ. ಮನುಷ್ಯರಿಗಿಂತ ಇವು ಇಷ್ಟೊಂದು ಸುಂದರವಾಗಿವೆಯೆಂಬುದು ಗೊತ್ತಾಗುತ್ತದೆ.
* ಸದಾ ಒಳ್ಳೆಯ ಕೆಲಸವನ್ನೇ ಏಕೆ ಮಾಡಬೇಕು? ಹೂವುಗಳನ್ನು ಕೊಡುವ ಕೈ ಸದಾ ಪರಿಮಳವನ್ನು ಸೂಸುತ್ತಿರುತ್ತದೆ. ಕೈಗೆ ಜೇನುತುಪ್ಪ ಅಂಟಿಕೊಂಡಿದ್ದರೆ ಯಾರೂ ಕೈ ನೆಕ್ಕದೇ ತೊಳೆದುಕೊಳ್ಳುವುದಿಲ್ಲ.
And….and….and….
Waiting for this…..
(ಈ ಸಾಲಿಗೆ ನನ್ನದೂ ಎರಡು ಕೊಡುಗೆಗಳಿವೆ).
I love your message.
Willy(Wilson)
1) nimmondige sadaa ibbaru vaidyariddare…… 2) dodda-sanna yendu kelasagalalli bheda-bhava …..3)sadaa hugaLannu kandaag….4)malegaagi prarthane ….kodeyirali !!
ive muntadavu hidisidavu ; chennagive.
Sir,
I read this “Who will cry when you die” book an year back…
i would like to share one instance here, while i was reading this book in office, my manager saw that book and got inspired. she read that book in a single day and many friends were inspired by that lovely book. Whenever i see a friend’s b’day on my calendar, i always buy that book as a gift.
sir thanks for this airticle
http://ubeforev.com/wp-content/uploads/2011/10/WHO-WILL-CRY-WHEN-U-DIE.pdf
Inspiring reading
Nice article. Thank you for the link @Deepak
Sir, super and super…..!!! i really love it… i m big fan of Kannada Prabha News paper… I daily read all the articles in the news paper…. I love it sir…. Especially ur articles r very very gud sir…. thanku very much sis….